25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದರು, ಆದರೆ ಸಹಕಾರಿ ಸಂಘದ 2 ಮಹಾಸಭೆಗೆ ಗೈರು ಹಾಜರಾದ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ. ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ಇದ್ದುದರಿಂದ ಚುನಾವಣಾಧಿಕಾರಿಗಳು ಸಹಕಾರಿ ಸಂಘದ ಚುನಾವಣೆಯ ಫಲಿತಾಂಶವನ್ನು ಘೋಷಣೆ ಮಾಡದೆ ತಡೆ ಹಿಡಿದಿದ್ದರು.

ಇದೀಗ ಹೈಕೋರ್ಟು ಅಂತಿಮ ಆದೇಶವನ್ನು ಮಾಡಿದ್ದು, ಇದರಿಂದಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ನಿರ್ದೇಶಕರು ಚುನಾಯಿತರಾಗಿದ್ದಾರೆ ಎಂದು ಕೋರ್ಟ್ ಆದೇಶ ನೀಡಿದೆ.

ನಿರ್ದೆಶಕರಾಗಿ ಆಯ್ಕೆಯಾದವರು : ರಾಘವೇಂದ್ರ ನಾಯಕ್ , ಕೊರಗಪ್ಪ ಗೌಡ, ರತೀಶ್ ಬಿ, ರಾಜು ಕೆ., ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ

Related posts

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya
error: Content is protected !!