37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

ಹೊಸಂಗಡಿ : ಎಕ್ಸಲೆಂಟ್ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಒ ಗಣೇಶ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿನ ಕಾರ್ಯ, ಕರ್ತವ್ಯ ಮತ್ತು ಹೊಣೆಗಾರಿಕೆಯ ಕುರಿತು ವಿವರವಾಗಿ ತಿಳಿಸಿದರು. ಗ್ರಾಮೀಣ ಅಭಿವೃದ್ಧಿಯ ಮೂಲಸೌಕರ್ಯ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳು ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಜ್ಞಾನ ಪಡೆದರು. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕುತೂಹಲಕ್ಕೆ ಉತ್ತರಗಳನ್ನು ಪಡೆದರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಮ್ಮ ಕೈಯಿಂದ ತಯಾರಿಸಿದ ಹೂಗುಚ್ಛ ನೀಡಿ ಗೌರವಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪರವರು ವಿದ್ಯಾರ್ಥಿಗಳಿಗೆ ಚುನಾವಣೆ ಪದ್ಧತಿಯ ಮಾಹಿತಿ ನೀಡಿದರು. ಸ್ಕೌಟ್ ಮಾಸ್ಟರ್ ನವೀನ್, ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿ, ಈ ಶಿಕ್ಷಣಾತ್ಮಕ ಭೇಟಿ ವಿದ್ಯಾರ್ಥಿಗಳಲ್ಲಿ ನಾಗರಿಕ ಜಾಗೃತಿ ಮತ್ತು ಜವಾಬ್ದಾರಿತ್ವ ಭಾವನೆ ಬೆಳೆಸಲು ಮಹತ್ವದ ಪಾತ್ರ ವಹಿಸಿತು.

Related posts

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!