July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

ಹೊಸಂಗಡಿ : ಎಕ್ಸಲೆಂಟ್ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಒ ಗಣೇಶ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿನ ಕಾರ್ಯ, ಕರ್ತವ್ಯ ಮತ್ತು ಹೊಣೆಗಾರಿಕೆಯ ಕುರಿತು ವಿವರವಾಗಿ ತಿಳಿಸಿದರು. ಗ್ರಾಮೀಣ ಅಭಿವೃದ್ಧಿಯ ಮೂಲಸೌಕರ್ಯ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳು ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಜ್ಞಾನ ಪಡೆದರು. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕುತೂಹಲಕ್ಕೆ ಉತ್ತರಗಳನ್ನು ಪಡೆದರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಮ್ಮ ಕೈಯಿಂದ ತಯಾರಿಸಿದ ಹೂಗುಚ್ಛ ನೀಡಿ ಗೌರವಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪರವರು ವಿದ್ಯಾರ್ಥಿಗಳಿಗೆ ಚುನಾವಣೆ ಪದ್ಧತಿಯ ಮಾಹಿತಿ ನೀಡಿದರು. ಸ್ಕೌಟ್ ಮಾಸ್ಟರ್ ನವೀನ್, ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿ, ಈ ಶಿಕ್ಷಣಾತ್ಮಕ ಭೇಟಿ ವಿದ್ಯಾರ್ಥಿಗಳಲ್ಲಿ ನಾಗರಿಕ ಜಾಗೃತಿ ಮತ್ತು ಜವಾಬ್ದಾರಿತ್ವ ಭಾವನೆ ಬೆಳೆಸಲು ಮಹತ್ವದ ಪಾತ್ರ ವಹಿಸಿತು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya
error: Content is protected !!