September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ.9 ರಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್ ನ ಸಭೆಯನ್ನು ಶೇಖರ ಪೂಜಾರಿ ಆನಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬದ ಹಿರಿಯರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನು ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್ ರವರ ಬಾಬ್ತು ಅವರ ಪೋಷಕರಾದ ಕೆ. ರಾಮಣ್ಣ ಪೂಜಾರಿ ಮತ್ತು ಶಾಂತಿ ಕೇರ್ಯ, ಕು| ಲಿಶನ್ ಹಾಗೂ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಸಹಕಾರ ಸಂಘದ ಉದ್ಯೋಗಿ ನಡುಕೇರ್ಯ ಸುಪ್ರೀತ್ ಕೆ ಇವರನ್ನು ಎಲ್ಲರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು.

ದೈವಗಳಿಗೆ ಪರಿಚಾಲಕರಾಗಿ ಜಯಾನಂದಾ ನಲ್ಕೆ ಸೇವೆಗೈದರು ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ , ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೆಯೇ ರಾತ್ರಿ ವೇಳೆ ನಡುಕೇರ್ಯ ತರವಾಡು ಟ್ರಸ್ಟ್ ನಿಂದ ಸಭೆ ನಡೆಯಿತು.

Related posts

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya
error: Content is protected !!