24.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya
error: Content is protected !!