38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya
error: Content is protected !!