July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!