ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!