23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಇತ್ತೀಚೆಗೆ ದಿವಂಗತರಾದ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಕಾಶ್ಮೀರಿ ಮೆನೇಜಸ್‌ ಅವರ ನಿಧನದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಇಂದು (ಫೆ. 15) ಶ್ರದ್ಧಾಂಜಲಿ ಸಭೆ ನಡೆಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಜೈನ್ ಅವರು, ಮೆನೇಜಸ್‌ ಅವರು ಸಂಸ್ಥೆಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.

ಶಿಕ್ಷಕ ಯುವರಾಜ ಅವರು ಶ್ರೀಯುತ ರಿಗೆ ನುಡಿ ನಮನವನ್ನು ಸಲ್ಲಿಸುತ್ತಾ , ಶಿಕ್ಷಣ ಕಾಶಿ ಎನಿಸಿದ ಉಜಿರೆಯಲ್ಲಿ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಆರಂಭವಾದ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿನಿಲಯದ ಪ್ರಧಾನ ಪಾಲಕರಾಗಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೃಷಿ, ಹೈನುಗಾರಿಕೆ, ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ನೀಡುವಲ್ಲಿ ಕಾಶ್ಮೀರಿ ಮೆನೇಜಸ್‌ ಸಫಲರಾದವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗ ಹಾಗೂ ಶ್ರೀ ಧ. ಮಂ. ರೆಸಿಡೆನ್ಶಿಯಲ್ ಪಿಯು ಕಾಲೇಜಿನ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು” ಎಂದರು.

ಕಾಶ್ಮೀರಿ ಮೆನೇಜಸ್‌ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು..

ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಕಚೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವೃಂದದವರು ಶ್ರೀಯತರ ಆತ್ಮ ಸದ್ಗತಿಗಾಗಿ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಿದರು.

Related posts

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya
error: Content is protected !!