24.9 C
ಪುತ್ತೂರು, ಬೆಳ್ತಂಗಡಿ
April 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

ಪುತ್ತೂರು : ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ ವ್ಯಾಪ್ತಿ ಹೊಂದಿರುವ ಪುತ್ತೂರು ಉಪ ವಿಭಾಗಕ್ಕೆ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.ಮುಂದಿನ ಕೆಲವೇ ದಿನಗಳಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಪ್ರಸ್ತುತ ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು ಎ.ಸಿ.ಯಾಗಿ ವರ್ಗಾಯಿಸಲಾಗಿದೆ. 13 ತಿಂಗಳ ಕಾಲ ಪುತ್ತೂರಿನಲ್ಲಿ ಎ.ಸಿ.ಯಾಗಿದ್ದ ಐಎಎಸ್ ಅಧಿಕಾರಿ ಜುಬಿನ್ ಮೊಹಾಪಾತ್ರ ಅವರು ಇತ್ತೀಚೆಗೆ ರಾಯಚೂರು ಮಹಾನಗರಪಾಲಿಕೆ ಆಯುಕ್ತರಾಗಿ ‘ಬಡ್ತಿಗೊಂಡಿದ್ದರು. ಇದಾದ ಬಳಿಕ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿಯಾಗಿರುವ ಶ್ರವಣ್ ಕುಮಾರ್ ಅವರು ಪುತ್ತೂರಿನ ಪ್ರಭಾರ ಎ.ಸಿ.ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮೂಲತ ಕಲಬುರ್ಗಿಯವರಾದ ಸ್ಟೆಲ್ಲಾ ವರ್ಗೀಸ್ ರವರು ಬಿಎಸ್ ಸಿ ಪದವಿಧರೆಯಾಗಿದ್ದಾರೆ.

Related posts

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!