23 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಮನ್ವಯಕರು ಚಂದ್ರ ಮೊಗವೀರ್ ಮಾತನಾಡಿ, ನಕರಾತ್ಮಕ ವಿಚಾರಗಳನ್ನು ಸಕರಾತ್ಮವಾಗಿ ಮಾಡಬಲ್ಲ ಶಕ್ತಿ ದೇವಸ್ಥಾನಗಳಲ್ಲಿ ಇದೆ. ದೇವಸ್ಥಾನ ಗಳು ಸರ್ಕಾರೀಕರ ಆದ ಬಳಿಕ ಹುಂಡಿಯ ಹಣಗಳು ಯಾವುದಾವುದಕ್ಕೋ ದುರುಪಯೋಗ ಆಗುತ್ತಿದೆ. ಧಾರ್ಮಿಕ ವಿಚಾರಗಳು ನಾಶವಾಗುತ್ತಿದೆ. ದೇವಸ್ಥಾನಗಳ ರಕ್ಷಣೆ ಆಗಬೇಕು, ದೇವಸ್ಥಾನದ ಭೂಮಿ ಉಳಿಸಬೇಕು. ಎಲ್ಲಾ ದೇವಸ್ಥಾನದ ಸಂಪರ್ಕ ಆಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಸನಾತನ ಸಂತರಾದ ರಮಾನಂದ ಗೌಡ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ನಾರಾಯಣ ಫದ್ಕೆ, ಬೆಳಾಲು ಅನಂತೋಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೇಟ್ನಾಯ, ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕರು ವಿಜಯ ಕುಮಾರ್, ಸಾಂತಪ್ಪ ಗೌಡ, ಪ್ರಶಾಂತ್ ಶಬರಾಯ, ಸುಧಾಕರ ಅಮ್ಮಾಜೆ, ಜಯ ಸಾಲಿಯಾನ್, ಬಾಲಕೃಷ್ಣ ಗೌಡ, ಆನಂದ ಗೌಡ, ಶಿವಾನಂದ್ ರಾವ್ ಉಪಸ್ಥಿತರಿದ್ದರು.

ವಕೀಲರರಾದ ತೀರ್ಥಶ್ ನಿರೂಪಿಸಿದರು. ಅಕ್ಷಯ್ ರಾವ್ ವಂದಿಸಿದರು.

Related posts

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya
error: Content is protected !!