July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಮನ್ವಯಕರು ಚಂದ್ರ ಮೊಗವೀರ್ ಮಾತನಾಡಿ, ನಕರಾತ್ಮಕ ವಿಚಾರಗಳನ್ನು ಸಕರಾತ್ಮವಾಗಿ ಮಾಡಬಲ್ಲ ಶಕ್ತಿ ದೇವಸ್ಥಾನಗಳಲ್ಲಿ ಇದೆ. ದೇವಸ್ಥಾನ ಗಳು ಸರ್ಕಾರೀಕರ ಆದ ಬಳಿಕ ಹುಂಡಿಯ ಹಣಗಳು ಯಾವುದಾವುದಕ್ಕೋ ದುರುಪಯೋಗ ಆಗುತ್ತಿದೆ. ಧಾರ್ಮಿಕ ವಿಚಾರಗಳು ನಾಶವಾಗುತ್ತಿದೆ. ದೇವಸ್ಥಾನಗಳ ರಕ್ಷಣೆ ಆಗಬೇಕು, ದೇವಸ್ಥಾನದ ಭೂಮಿ ಉಳಿಸಬೇಕು. ಎಲ್ಲಾ ದೇವಸ್ಥಾನದ ಸಂಪರ್ಕ ಆಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಸನಾತನ ಸಂತರಾದ ರಮಾನಂದ ಗೌಡ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ನಾರಾಯಣ ಫದ್ಕೆ, ಬೆಳಾಲು ಅನಂತೋಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೇಟ್ನಾಯ, ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕರು ವಿಜಯ ಕುಮಾರ್, ಸಾಂತಪ್ಪ ಗೌಡ, ಪ್ರಶಾಂತ್ ಶಬರಾಯ, ಸುಧಾಕರ ಅಮ್ಮಾಜೆ, ಜಯ ಸಾಲಿಯಾನ್, ಬಾಲಕೃಷ್ಣ ಗೌಡ, ಆನಂದ ಗೌಡ, ಶಿವಾನಂದ್ ರಾವ್ ಉಪಸ್ಥಿತರಿದ್ದರು.

ವಕೀಲರರಾದ ತೀರ್ಥಶ್ ನಿರೂಪಿಸಿದರು. ಅಕ್ಷಯ್ ರಾವ್ ವಂದಿಸಿದರು.

Related posts

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya
error: Content is protected !!