23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಮನ್ವಯಕರು ಚಂದ್ರ ಮೊಗವೀರ್ ಮಾತನಾಡಿ, ನಕರಾತ್ಮಕ ವಿಚಾರಗಳನ್ನು ಸಕರಾತ್ಮವಾಗಿ ಮಾಡಬಲ್ಲ ಶಕ್ತಿ ದೇವಸ್ಥಾನಗಳಲ್ಲಿ ಇದೆ. ದೇವಸ್ಥಾನ ಗಳು ಸರ್ಕಾರೀಕರ ಆದ ಬಳಿಕ ಹುಂಡಿಯ ಹಣಗಳು ಯಾವುದಾವುದಕ್ಕೋ ದುರುಪಯೋಗ ಆಗುತ್ತಿದೆ. ಧಾರ್ಮಿಕ ವಿಚಾರಗಳು ನಾಶವಾಗುತ್ತಿದೆ. ದೇವಸ್ಥಾನಗಳ ರಕ್ಷಣೆ ಆಗಬೇಕು, ದೇವಸ್ಥಾನದ ಭೂಮಿ ಉಳಿಸಬೇಕು. ಎಲ್ಲಾ ದೇವಸ್ಥಾನದ ಸಂಪರ್ಕ ಆಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಸನಾತನ ಸಂತರಾದ ರಮಾನಂದ ಗೌಡ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ನಾರಾಯಣ ಫದ್ಕೆ, ಬೆಳಾಲು ಅನಂತೋಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೇಟ್ನಾಯ, ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕರು ವಿಜಯ ಕುಮಾರ್, ಸಾಂತಪ್ಪ ಗೌಡ, ಪ್ರಶಾಂತ್ ಶಬರಾಯ, ಸುಧಾಕರ ಅಮ್ಮಾಜೆ, ಜಯ ಸಾಲಿಯಾನ್, ಬಾಲಕೃಷ್ಣ ಗೌಡ, ಆನಂದ ಗೌಡ, ಶಿವಾನಂದ್ ರಾವ್ ಉಪಸ್ಥಿತರಿದ್ದರು.

ವಕೀಲರರಾದ ತೀರ್ಥಶ್ ನಿರೂಪಿಸಿದರು. ಅಕ್ಷಯ್ ರಾವ್ ವಂದಿಸಿದರು.

Related posts

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya
error: Content is protected !!