23.1 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಬಾಜೆ : ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟ ಶಿಬಾಜೆ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ರಾಜೀವಗಾಂಧಿ ಸೇವಾ ಕೇಂದ್ರ ಪೆರ್ಲದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಕನ್ಯಾರವರ ಅಧ್ಯಕ್ಷತೆಯಲ್ಲಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾರವರ ಉಪಸ್ಥಿತಿಯಲ್ಲಿ ಮತ್ತು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಯಿತು.


ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಉಪಾಧ್ಯಕ್ಷ ದಿನಕರ್ ಕುರುಪ್ ರವರು ಪ್ರಸ್ತಾವಿಕ ಮಾತುಗಳನ್ನಾಡಿ, ಶಿಬಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ಸಂಜೀವಿನಿ ಒಕ್ಕೂಟದ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಎಮ್.ಬಿ.ಕೆ ಹಾಗೂ ಎಲ್.ಸಿ ಆರ್ ಪಿ ಗಳ ಗೌರವ ಧನ ಹೆಚ್ಚಳದ ಬಗ್ಗೆ ಪಂಚಾಯತ್ ನಿರ್ಣಯದ ಮೂಲಕ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ಎಲ್.ಸಿ ಆರ್ ಪಿ ಗೀತಾರವರು ಸ್ವಾಗತಿಸಿದರು. ಒಂದು ವರ್ಷದ ವಾರ್ಷಿಕ ವರದಿಯನ್ನು ಪಶುಸಖಿ ದಿವ್ಯಾರವರು ಮಂಡಿಸಿ ಅನುಮೋದನೆ ಪಡೆಯಲಾಯಿತು. ವಾರ್ಷಿಕ ಲೆಕ್ಕ ಪರಿಶೋಧನೆಯ ವರದಿಯನ್ನು ಕೃಷಿ ಸಖಿ ಜಯಂತಿಯವರು ಮಂಡಿಸಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಸಂಜೀವಿನಿಯ ಧ್ಯೇಯ-ಉದ್ದೇಶ-ಜವಾಬ್ದಾರಿ ಹಾಗೂ ಕಾರ್ಯವೈಖರಿಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮಾತನಾಡಿ ಬಟ್ಟೆ ಚೀಲ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya
error: Content is protected !!