22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಬಾಜೆ : ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟ ಶಿಬಾಜೆ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ರಾಜೀವಗಾಂಧಿ ಸೇವಾ ಕೇಂದ್ರ ಪೆರ್ಲದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಕನ್ಯಾರವರ ಅಧ್ಯಕ್ಷತೆಯಲ್ಲಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾರವರ ಉಪಸ್ಥಿತಿಯಲ್ಲಿ ಮತ್ತು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಯಿತು.


ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಉಪಾಧ್ಯಕ್ಷ ದಿನಕರ್ ಕುರುಪ್ ರವರು ಪ್ರಸ್ತಾವಿಕ ಮಾತುಗಳನ್ನಾಡಿ, ಶಿಬಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ಸಂಜೀವಿನಿ ಒಕ್ಕೂಟದ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಎಮ್.ಬಿ.ಕೆ ಹಾಗೂ ಎಲ್.ಸಿ ಆರ್ ಪಿ ಗಳ ಗೌರವ ಧನ ಹೆಚ್ಚಳದ ಬಗ್ಗೆ ಪಂಚಾಯತ್ ನಿರ್ಣಯದ ಮೂಲಕ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ಎಲ್.ಸಿ ಆರ್ ಪಿ ಗೀತಾರವರು ಸ್ವಾಗತಿಸಿದರು. ಒಂದು ವರ್ಷದ ವಾರ್ಷಿಕ ವರದಿಯನ್ನು ಪಶುಸಖಿ ದಿವ್ಯಾರವರು ಮಂಡಿಸಿ ಅನುಮೋದನೆ ಪಡೆಯಲಾಯಿತು. ವಾರ್ಷಿಕ ಲೆಕ್ಕ ಪರಿಶೋಧನೆಯ ವರದಿಯನ್ನು ಕೃಷಿ ಸಖಿ ಜಯಂತಿಯವರು ಮಂಡಿಸಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಸಂಜೀವಿನಿಯ ಧ್ಯೇಯ-ಉದ್ದೇಶ-ಜವಾಬ್ದಾರಿ ಹಾಗೂ ಕಾರ್ಯವೈಖರಿಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮಾತನಾಡಿ ಬಟ್ಟೆ ಚೀಲ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು.

Related posts

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya
error: Content is protected !!