September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದರು, ಆದರೆ ಸಹಕಾರಿ ಸಂಘದ 2 ಮಹಾಸಭೆಗೆ ಗೈರು ಹಾಜರಾದ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ. ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ಇದ್ದುದರಿಂದ ಚುನಾವಣಾಧಿಕಾರಿಗಳು ಸಹಕಾರಿ ಸಂಘದ ಚುನಾವಣೆಯ ಫಲಿತಾಂಶವನ್ನು ಘೋಷಣೆ ಮಾಡದೆ ತಡೆ ಹಿಡಿದಿದ್ದರು.

ಇದೀಗ ಹೈಕೋರ್ಟು ಅಂತಿಮ ಆದೇಶವನ್ನು ಮಾಡಿದ್ದು, ಇದರಿಂದಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ನಿರ್ದೇಶಕರು ಚುನಾಯಿತರಾಗಿದ್ದಾರೆ ಎಂದು ಕೋರ್ಟ್ ಆದೇಶ ನೀಡಿದೆ.

ನಿರ್ದೆಶಕರಾಗಿ ಆಯ್ಕೆಯಾದವರು : ರಾಘವೇಂದ್ರ ನಾಯಕ್ , ಕೊರಗಪ್ಪ ಗೌಡ, ರತೀಶ್ ಬಿ, ರಾಜು ಕೆ., ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ

Related posts

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!