25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

ಹೊಸಂಗಡಿ : ಎಕ್ಸಲೆಂಟ್ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಒ ಗಣೇಶ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿನ ಕಾರ್ಯ, ಕರ್ತವ್ಯ ಮತ್ತು ಹೊಣೆಗಾರಿಕೆಯ ಕುರಿತು ವಿವರವಾಗಿ ತಿಳಿಸಿದರು. ಗ್ರಾಮೀಣ ಅಭಿವೃದ್ಧಿಯ ಮೂಲಸೌಕರ್ಯ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳು ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಜ್ಞಾನ ಪಡೆದರು. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕುತೂಹಲಕ್ಕೆ ಉತ್ತರಗಳನ್ನು ಪಡೆದರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಮ್ಮ ಕೈಯಿಂದ ತಯಾರಿಸಿದ ಹೂಗುಚ್ಛ ನೀಡಿ ಗೌರವಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪರವರು ವಿದ್ಯಾರ್ಥಿಗಳಿಗೆ ಚುನಾವಣೆ ಪದ್ಧತಿಯ ಮಾಹಿತಿ ನೀಡಿದರು. ಸ್ಕೌಟ್ ಮಾಸ್ಟರ್ ನವೀನ್, ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿ, ಈ ಶಿಕ್ಷಣಾತ್ಮಕ ಭೇಟಿ ವಿದ್ಯಾರ್ಥಿಗಳಲ್ಲಿ ನಾಗರಿಕ ಜಾಗೃತಿ ಮತ್ತು ಜವಾಬ್ದಾರಿತ್ವ ಭಾವನೆ ಬೆಳೆಸಲು ಮಹತ್ವದ ಪಾತ್ರ ವಹಿಸಿತು.

Related posts

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya
error: Content is protected !!