September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

ಹೊಸಂಗಡಿ : ಎಕ್ಸಲೆಂಟ್ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಒ ಗಣೇಶ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿನ ಕಾರ್ಯ, ಕರ್ತವ್ಯ ಮತ್ತು ಹೊಣೆಗಾರಿಕೆಯ ಕುರಿತು ವಿವರವಾಗಿ ತಿಳಿಸಿದರು. ಗ್ರಾಮೀಣ ಅಭಿವೃದ್ಧಿಯ ಮೂಲಸೌಕರ್ಯ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳು ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಜ್ಞಾನ ಪಡೆದರು. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕುತೂಹಲಕ್ಕೆ ಉತ್ತರಗಳನ್ನು ಪಡೆದರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಮ್ಮ ಕೈಯಿಂದ ತಯಾರಿಸಿದ ಹೂಗುಚ್ಛ ನೀಡಿ ಗೌರವಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪರವರು ವಿದ್ಯಾರ್ಥಿಗಳಿಗೆ ಚುನಾವಣೆ ಪದ್ಧತಿಯ ಮಾಹಿತಿ ನೀಡಿದರು. ಸ್ಕೌಟ್ ಮಾಸ್ಟರ್ ನವೀನ್, ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿ, ಈ ಶಿಕ್ಷಣಾತ್ಮಕ ಭೇಟಿ ವಿದ್ಯಾರ್ಥಿಗಳಲ್ಲಿ ನಾಗರಿಕ ಜಾಗೃತಿ ಮತ್ತು ಜವಾಬ್ದಾರಿತ್ವ ಭಾವನೆ ಬೆಳೆಸಲು ಮಹತ್ವದ ಪಾತ್ರ ವಹಿಸಿತು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಕಳಿಯ: ಸಂಬೋಳ್ಯ-ಓಡ್ರೊಟ್ಟು ಪ.ಪಂಗಡ ರಸ್ತೆ ಕಾಂಕ್ರೀಟಿಕರಣಕ್ಕೆ ವಿ.ಪ. ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನ ಮಂಜೂರು: ಮಾಜಿ ಪಂ.ಸದಸ್ಯರಿಂದ ರಸ್ತೆ ಪರಿಶೀಲನೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!