23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ.9 ರಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್ ನ ಸಭೆಯನ್ನು ಶೇಖರ ಪೂಜಾರಿ ಆನಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬದ ಹಿರಿಯರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನು ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್ ರವರ ಬಾಬ್ತು ಅವರ ಪೋಷಕರಾದ ಕೆ. ರಾಮಣ್ಣ ಪೂಜಾರಿ ಮತ್ತು ಶಾಂತಿ ಕೇರ್ಯ, ಕು| ಲಿಶನ್ ಹಾಗೂ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಸಹಕಾರ ಸಂಘದ ಉದ್ಯೋಗಿ ನಡುಕೇರ್ಯ ಸುಪ್ರೀತ್ ಕೆ ಇವರನ್ನು ಎಲ್ಲರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು.

ದೈವಗಳಿಗೆ ಪರಿಚಾಲಕರಾಗಿ ಜಯಾನಂದಾ ನಲ್ಕೆ ಸೇವೆಗೈದರು ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ , ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೆಯೇ ರಾತ್ರಿ ವೇಳೆ ನಡುಕೇರ್ಯ ತರವಾಡು ಟ್ರಸ್ಟ್ ನಿಂದ ಸಭೆ ನಡೆಯಿತು.

Related posts

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya
error: Content is protected !!