30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!