July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya
error: Content is protected !!