23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!