April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

ಬೆಳ್ತಂಗಡಿ : ಇಲ್ಲಿಯ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿದ್ಯಾರ್ಥಿಗಳಲ್ಲಿ ಗಣಿತದ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮವನ್ನು ಫೆ.15 ರಂದು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಇದರ ಸಂಪನ್ಮೂಲ ವ್ಯಕ್ತಿಗಳಾದ ಮೋಹನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ಗಿಡಕ್ಕೆ ನೀರನ್ನ ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ಚರಣ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಾರಿಜಾ, ಶಾಲಾ ಮುಖ್ಯ ಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರು, ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು. ಗಣಿತ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ವಿದ್ಯಾಶೆಣೈರವರು ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು.

ವಿದ್ಯಾರ್ಥಿಗಳು ಮನೆಯಲ್ಲೇ ಬೆಳೆದ ನಾನಾ ಬಗೆಯ ತರಕಾರಿಗಳು, ಹಣ್ಣುಗಳು ಹಾಗೂ ವಿವಿಧ ಬಗೆಯ ಸ್ಟೇಷನರಿ ವಸ್ತುಗಳನ್ನ ಮಾರಾಟಕ್ಕೆ ಅಣಿಗೊಳಿಸಿದ್ದರು. ಇದರ ಜೊತೆಯಲ್ಲಿ ತಾವೇ ತಯಾರಿಸಿದ ಬಗೆಬಗೆಯ ತಿಂಡಿ ತಿನಿಸು, ಚುರುಮುರಿ, ಪಾನೀಯಗಳನ್ನು ಮಾರಾಟ ಮಾಡಿದರು. ಶಾಲಾ ಮಕ್ಕಳ ಜೊತೆಯಲ್ಲಿ ಪೋಷಕರು ಸಹ ಈ ವೇಳೆಯಲ್ಲಿ ಪಾಲ್ಗೊಂಡು ಮಕ್ಕಳ ವ್ಯವಹಾರ ಜ್ಞಾನ ಹೆಚ್ಚಿಸಲು ನೆರವನ್ನ ನೀಡಿದರು. ಚಿಕ್ಕ ಚಿಕ್ಕ ಮಕ್ಕಳು ವಸ್ತುಗಳನ್ನು ಖರೀದಿಸಿ ಸಂಭ್ರಮಿಸಿದರು. ಶಿಕ್ಷಕಿ ಶ್ರೀಮತಿ ಶುಭ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಂದಿಸಿದರು.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!