April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಮನ್ವಯಕರು ಚಂದ್ರ ಮೊಗವೀರ್ ಮಾತನಾಡಿ, ನಕರಾತ್ಮಕ ವಿಚಾರಗಳನ್ನು ಸಕರಾತ್ಮವಾಗಿ ಮಾಡಬಲ್ಲ ಶಕ್ತಿ ದೇವಸ್ಥಾನಗಳಲ್ಲಿ ಇದೆ. ದೇವಸ್ಥಾನ ಗಳು ಸರ್ಕಾರೀಕರ ಆದ ಬಳಿಕ ಹುಂಡಿಯ ಹಣಗಳು ಯಾವುದಾವುದಕ್ಕೋ ದುರುಪಯೋಗ ಆಗುತ್ತಿದೆ. ಧಾರ್ಮಿಕ ವಿಚಾರಗಳು ನಾಶವಾಗುತ್ತಿದೆ. ದೇವಸ್ಥಾನಗಳ ರಕ್ಷಣೆ ಆಗಬೇಕು, ದೇವಸ್ಥಾನದ ಭೂಮಿ ಉಳಿಸಬೇಕು. ಎಲ್ಲಾ ದೇವಸ್ಥಾನದ ಸಂಪರ್ಕ ಆಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಸನಾತನ ಸಂತರಾದ ರಮಾನಂದ ಗೌಡ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ನಾರಾಯಣ ಫದ್ಕೆ, ಬೆಳಾಲು ಅನಂತೋಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೇಟ್ನಾಯ, ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕರು ವಿಜಯ ಕುಮಾರ್, ಸಾಂತಪ್ಪ ಗೌಡ, ಪ್ರಶಾಂತ್ ಶಬರಾಯ, ಸುಧಾಕರ ಅಮ್ಮಾಜೆ, ಜಯ ಸಾಲಿಯಾನ್, ಬಾಲಕೃಷ್ಣ ಗೌಡ, ಆನಂದ ಗೌಡ, ಶಿವಾನಂದ್ ರಾವ್ ಉಪಸ್ಥಿತರಿದ್ದರು.

ವಕೀಲರರಾದ ತೀರ್ಥಶ್ ನಿರೂಪಿಸಿದರು. ಅಕ್ಷಯ್ ರಾವ್ ವಂದಿಸಿದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya
error: Content is protected !!