30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಮನ್ವಯಕರು ಚಂದ್ರ ಮೊಗವೀರ್ ಮಾತನಾಡಿ, ನಕರಾತ್ಮಕ ವಿಚಾರಗಳನ್ನು ಸಕರಾತ್ಮವಾಗಿ ಮಾಡಬಲ್ಲ ಶಕ್ತಿ ದೇವಸ್ಥಾನಗಳಲ್ಲಿ ಇದೆ. ದೇವಸ್ಥಾನ ಗಳು ಸರ್ಕಾರೀಕರ ಆದ ಬಳಿಕ ಹುಂಡಿಯ ಹಣಗಳು ಯಾವುದಾವುದಕ್ಕೋ ದುರುಪಯೋಗ ಆಗುತ್ತಿದೆ. ಧಾರ್ಮಿಕ ವಿಚಾರಗಳು ನಾಶವಾಗುತ್ತಿದೆ. ದೇವಸ್ಥಾನಗಳ ರಕ್ಷಣೆ ಆಗಬೇಕು, ದೇವಸ್ಥಾನದ ಭೂಮಿ ಉಳಿಸಬೇಕು. ಎಲ್ಲಾ ದೇವಸ್ಥಾನದ ಸಂಪರ್ಕ ಆಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಸನಾತನ ಸಂತರಾದ ರಮಾನಂದ ಗೌಡ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ನಾರಾಯಣ ಫದ್ಕೆ, ಬೆಳಾಲು ಅನಂತೋಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೇಟ್ನಾಯ, ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕರು ವಿಜಯ ಕುಮಾರ್, ಸಾಂತಪ್ಪ ಗೌಡ, ಪ್ರಶಾಂತ್ ಶಬರಾಯ, ಸುಧಾಕರ ಅಮ್ಮಾಜೆ, ಜಯ ಸಾಲಿಯಾನ್, ಬಾಲಕೃಷ್ಣ ಗೌಡ, ಆನಂದ ಗೌಡ, ಶಿವಾನಂದ್ ರಾವ್ ಉಪಸ್ಥಿತರಿದ್ದರು.

ವಕೀಲರರಾದ ತೀರ್ಥಶ್ ನಿರೂಪಿಸಿದರು. ಅಕ್ಷಯ್ ರಾವ್ ವಂದಿಸಿದರು.

Related posts

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya
error: Content is protected !!