30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಬಾಜೆ : ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟ ಶಿಬಾಜೆ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ರಾಜೀವಗಾಂಧಿ ಸೇವಾ ಕೇಂದ್ರ ಪೆರ್ಲದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಕನ್ಯಾರವರ ಅಧ್ಯಕ್ಷತೆಯಲ್ಲಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾರವರ ಉಪಸ್ಥಿತಿಯಲ್ಲಿ ಮತ್ತು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಯಿತು.


ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಉಪಾಧ್ಯಕ್ಷ ದಿನಕರ್ ಕುರುಪ್ ರವರು ಪ್ರಸ್ತಾವಿಕ ಮಾತುಗಳನ್ನಾಡಿ, ಶಿಬಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ಸಂಜೀವಿನಿ ಒಕ್ಕೂಟದ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಎಮ್.ಬಿ.ಕೆ ಹಾಗೂ ಎಲ್.ಸಿ ಆರ್ ಪಿ ಗಳ ಗೌರವ ಧನ ಹೆಚ್ಚಳದ ಬಗ್ಗೆ ಪಂಚಾಯತ್ ನಿರ್ಣಯದ ಮೂಲಕ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ಎಲ್.ಸಿ ಆರ್ ಪಿ ಗೀತಾರವರು ಸ್ವಾಗತಿಸಿದರು. ಒಂದು ವರ್ಷದ ವಾರ್ಷಿಕ ವರದಿಯನ್ನು ಪಶುಸಖಿ ದಿವ್ಯಾರವರು ಮಂಡಿಸಿ ಅನುಮೋದನೆ ಪಡೆಯಲಾಯಿತು. ವಾರ್ಷಿಕ ಲೆಕ್ಕ ಪರಿಶೋಧನೆಯ ವರದಿಯನ್ನು ಕೃಷಿ ಸಖಿ ಜಯಂತಿಯವರು ಮಂಡಿಸಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಸಂಜೀವಿನಿಯ ಧ್ಯೇಯ-ಉದ್ದೇಶ-ಜವಾಬ್ದಾರಿ ಹಾಗೂ ಕಾರ್ಯವೈಖರಿಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮಾತನಾಡಿ ಬಟ್ಟೆ ಚೀಲ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು.

Related posts

ಮರದಿಂದ ಬಿದ್ದು ಸಾವು

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya
error: Content is protected !!