July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಬಾಜೆ : ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟ ಶಿಬಾಜೆ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ರಾಜೀವಗಾಂಧಿ ಸೇವಾ ಕೇಂದ್ರ ಪೆರ್ಲದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಕನ್ಯಾರವರ ಅಧ್ಯಕ್ಷತೆಯಲ್ಲಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾರವರ ಉಪಸ್ಥಿತಿಯಲ್ಲಿ ಮತ್ತು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಯಿತು.


ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಉಪಾಧ್ಯಕ್ಷ ದಿನಕರ್ ಕುರುಪ್ ರವರು ಪ್ರಸ್ತಾವಿಕ ಮಾತುಗಳನ್ನಾಡಿ, ಶಿಬಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ಸಂಜೀವಿನಿ ಒಕ್ಕೂಟದ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಎಮ್.ಬಿ.ಕೆ ಹಾಗೂ ಎಲ್.ಸಿ ಆರ್ ಪಿ ಗಳ ಗೌರವ ಧನ ಹೆಚ್ಚಳದ ಬಗ್ಗೆ ಪಂಚಾಯತ್ ನಿರ್ಣಯದ ಮೂಲಕ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ಎಲ್.ಸಿ ಆರ್ ಪಿ ಗೀತಾರವರು ಸ್ವಾಗತಿಸಿದರು. ಒಂದು ವರ್ಷದ ವಾರ್ಷಿಕ ವರದಿಯನ್ನು ಪಶುಸಖಿ ದಿವ್ಯಾರವರು ಮಂಡಿಸಿ ಅನುಮೋದನೆ ಪಡೆಯಲಾಯಿತು. ವಾರ್ಷಿಕ ಲೆಕ್ಕ ಪರಿಶೋಧನೆಯ ವರದಿಯನ್ನು ಕೃಷಿ ಸಖಿ ಜಯಂತಿಯವರು ಮಂಡಿಸಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಸಂಜೀವಿನಿಯ ಧ್ಯೇಯ-ಉದ್ದೇಶ-ಜವಾಬ್ದಾರಿ ಹಾಗೂ ಕಾರ್ಯವೈಖರಿಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮಾತನಾಡಿ ಬಟ್ಟೆ ಚೀಲ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು.

Related posts

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
error: Content is protected !!