ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಫೆ.16ರಂದು ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.

ಹಲವರು ಸಮಯಗಳಿಂದ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಅನ್ವಾರ್ ಎಂಬಾತನಿಗೆ ಸೇರಿದ ಜಾಗದಲ್ಲಿ ಅನಧಿಕೃತ ಕಸಾಯಿಖಾನೆಯಲ್ಲಿ ಇಬ್ಬರು ಸೇರಿ ದನವನ್ನು ವಧೆ ಮಾಡುವಾಗ ಬೆಳ್ತಂಗಡಿ ಪೊಲೀಸರು ಫೆ.16 ರಂದು ಸಂಜೆ ದಾಳಿ ಮಾಡಿದ್ದು. ಸ್ಥಳದಲ್ಲಿ ಸುಮಾರು 85 ಕೆ.ಜಿ ದನ ಮಾಂಸ ,ಕತ್ತಿ, ಒಂದು ಬೊಲೆರೋ ವಾಹನ ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿ ಕುಮಾರ್ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ.ಹೆಚ್.ಎಮ್ ನೇತೃತ್ವದ ಸಿಬ್ಬಂದಿ ಬೆನ್ನಚ್ಚನ್, ಪ್ರಮೋದ್ ನಾಯ್ಕ, ವಿಶ್ವನಾಥ್ ನಾಯ್ಕ್, ಜಗದೀಶ್ ಅತ್ತಾಜೆ, ಚರಣ್ ರಾಜ್, ಶಿವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya
error: Content is protected !!