23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya
error: Content is protected !!