September 6, 2026
Uncategorized

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.

ಕಳೆದ ಹಲವು ಸಮಯದಿಂದ ಇಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದು ಈ ಬಗ್ಗೆ ದೂರುಗಳು ಕೇಳಿ ಬಂದಿದ್ದವು ಈ ಹಿನ್ನಲೆಯಲ್ಲಿ ಪೊಲೀಸರು ಇಲ್ಲಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಅನ್ವ‌ರ್ ಎಂಬಾತನಿಗೆ ಸೇರಿದ ಜಾಗದಲ್ಲಿ ಅನಧಿಕೃತ ಕಸಾಯಿಖಾನೆ ನಡೆಯುತ್ತಿತ್ತು.

ಆರೋಪಿಗಳಿಬ್ಬರು ಸೇರಿ ದನವನ್ನು ವಧೆ ಮಾಡಿ ಮಾಂಸ ತಯಾರಿಸುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು. ಸ್ಥಳದಲ್ಲಿ ಸುಮಾರು 85 ಕೆ.ಜಿ ದನದ ಮಾಂಸ ಪತ್ತೆಯಾಗಿದೆ ಸ್ಥಳದಿಂದ ಒಂದು ಬೊಲೆರೋ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಸ್ಥಳಕ್ಕೆ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿ ಕುಮಾ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ಇನ್ಸೆಕ್ಟರ್ ಸುಬ್ಬಪುರ್ ಮಠ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸೆಕ್ಟರ್ ಯಲ್ಲಪ್ಪ. ಹೆಚ್.ಎಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬೆನ್ನಚ್ಚನ್, ಪ್ರಮೋದ್ ನಾಯ್ಕ, ವಿಶ್ವನಾಥ್, ಜಗದೀಶ್‌ ಅತ್ತಾಜೆ, ಚರಣ್ ರಾಜ್, ಶಿವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya
error: Content is protected !!