July 23, 2026
Uncategorized

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.

ಕಳೆದ ಹಲವು ಸಮಯದಿಂದ ಇಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದು ಈ ಬಗ್ಗೆ ದೂರುಗಳು ಕೇಳಿ ಬಂದಿದ್ದವು ಈ ಹಿನ್ನಲೆಯಲ್ಲಿ ಪೊಲೀಸರು ಇಲ್ಲಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಅನ್ವ‌ರ್ ಎಂಬಾತನಿಗೆ ಸೇರಿದ ಜಾಗದಲ್ಲಿ ಅನಧಿಕೃತ ಕಸಾಯಿಖಾನೆ ನಡೆಯುತ್ತಿತ್ತು.

ಆರೋಪಿಗಳಿಬ್ಬರು ಸೇರಿ ದನವನ್ನು ವಧೆ ಮಾಡಿ ಮಾಂಸ ತಯಾರಿಸುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು. ಸ್ಥಳದಲ್ಲಿ ಸುಮಾರು 85 ಕೆ.ಜಿ ದನದ ಮಾಂಸ ಪತ್ತೆಯಾಗಿದೆ ಸ್ಥಳದಿಂದ ಒಂದು ಬೊಲೆರೋ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಸ್ಥಳಕ್ಕೆ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿ ಕುಮಾ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ಇನ್ಸೆಕ್ಟರ್ ಸುಬ್ಬಪುರ್ ಮಠ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸೆಕ್ಟರ್ ಯಲ್ಲಪ್ಪ. ಹೆಚ್.ಎಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬೆನ್ನಚ್ಚನ್, ಪ್ರಮೋದ್ ನಾಯ್ಕ, ವಿಶ್ವನಾಥ್, ಜಗದೀಶ್‌ ಅತ್ತಾಜೆ, ಚರಣ್ ರಾಜ್, ಶಿವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya
error: Content is protected !!