23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಫೆ.16ರಂದು ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.

ಹಲವರು ಸಮಯಗಳಿಂದ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಅನ್ವಾರ್ ಎಂಬಾತನಿಗೆ ಸೇರಿದ ಜಾಗದಲ್ಲಿ ಅನಧಿಕೃತ ಕಸಾಯಿಖಾನೆಯಲ್ಲಿ ಇಬ್ಬರು ಸೇರಿ ದನವನ್ನು ವಧೆ ಮಾಡುವಾಗ ಬೆಳ್ತಂಗಡಿ ಪೊಲೀಸರು ಫೆ.16 ರಂದು ಸಂಜೆ ದಾಳಿ ಮಾಡಿದ್ದು. ಸ್ಥಳದಲ್ಲಿ ಸುಮಾರು 85 ಕೆ.ಜಿ ದನ ಮಾಂಸ ,ಕತ್ತಿ, ಒಂದು ಬೊಲೆರೋ ವಾಹನ ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿ ಕುಮಾರ್ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ.ಹೆಚ್.ಎಮ್ ನೇತೃತ್ವದ ಸಿಬ್ಬಂದಿ ಬೆನ್ನಚ್ಚನ್, ಪ್ರಮೋದ್ ನಾಯ್ಕ, ವಿಶ್ವನಾಥ್ ನಾಯ್ಕ್, ಜಗದೀಶ್ ಅತ್ತಾಜೆ, ಚರಣ್ ರಾಜ್, ಶಿವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!