ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಫೆ.16ರಂದು ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.

ಹಲವರು ಸಮಯಗಳಿಂದ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಅನ್ವಾರ್ ಎಂಬಾತನಿಗೆ ಸೇರಿದ ಜಾಗದಲ್ಲಿ ಅನಧಿಕೃತ ಕಸಾಯಿಖಾನೆಯಲ್ಲಿ ಇಬ್ಬರು ಸೇರಿ ದನವನ್ನು ವಧೆ ಮಾಡುವಾಗ ಬೆಳ್ತಂಗಡಿ ಪೊಲೀಸರು ಫೆ.16 ರಂದು ಸಂಜೆ ದಾಳಿ ಮಾಡಿದ್ದು. ಸ್ಥಳದಲ್ಲಿ ಸುಮಾರು 85 ಕೆ.ಜಿ ದನ ಮಾಂಸ ,ಕತ್ತಿ, ಒಂದು ಬೊಲೆರೋ ವಾಹನ ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿ ಕುಮಾರ್ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ.ಹೆಚ್.ಎಮ್ ನೇತೃತ್ವದ ಸಿಬ್ಬಂದಿ ಬೆನ್ನಚ್ಚನ್, ಪ್ರಮೋದ್ ನಾಯ್ಕ, ವಿಶ್ವನಾಥ್ ನಾಯ್ಕ್, ಜಗದೀಶ್ ಅತ್ತಾಜೆ, ಚರಣ್ ರಾಜ್, ಶಿವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya
error: Content is protected !!