April 21, 2025
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಆಟಿ ತಿಂಗೊಲ್ಡ್ ಜೋಕ್ಲೆ ಗೇನ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!