34.6 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರಿಗೆ ಗುರುವಾಯನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಮ್ ಇವರ ನೇತೃತ್ವದಲ್ಲಿ, ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಬಗ್ಗೆ , ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು. ಈ ಮನವಿಗೆ ಸಚಿವರು ಅಲ್ಲೇ ಇದ್ದ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವ ಬಗ್ಗೆ ಆದೇಶವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು

Related posts

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!