23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ


ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆ.16 ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಾಣ ರಾವ್,  ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ, ಸಂತೋಷ್ ಗೌಡ, ಶಿವರಾಮ್, ಶ್ರೀಮತಿ ಪವಿತ್ರ, ಶ್ರೀಮತಿ ಭವಾನಿ, ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ  ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0825626644, 9663464648, 8147263422

Related posts

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!