July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭವು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14 ರಂದು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರ್ಶ್ವನಾಥ ಅಜ್ರಿ ಪ್ರಾಂಶುಪಾಲರು ಶ್ರೀ ದವಳ ಕಾಲೇಜ್ ಮೂಡಬಿದಿರಿ ಇವರು ವಹಿಸಿ ಮಾತನಾಡಿ ಎನ್ಎಸ್ಎಸ್ ಒಬ್ಬ ವ್ಯಕ್ತಿಯ ಪರಿಪೂರ್ಣತೆಗೆ ಹೇಗೆ ಸಾಧ್ಯವಾಗುತ್ತದೆ ಎನ್ನುವಂತದ್ದನ್ನು ವಿವರಿಸಿದರು.

ಸಮಾರಂಭದ ಸಮರೋಪ ಭಾಷಣವನ್ನು ಕೆ. ಹೇಮರಾಜ್ ಸಂಚಾಲಕರು ಡಿ ಜೆ ವಿ ಸಂಘ ಮೂಡಬಿದ್ರೆ ನಿರ್ವಹಿಸಿಮಾತನಾಡಿ ಎನ್ಎಸ್ಎಸ್ ಕೈಗೊಂಡ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಯಶಸ್ವಿಯಾಗಲು ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವುದರಿಂದ ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಸಂತ ಜೂಡರ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಮುಖ್ಯೋಪಾಧ್ಯಾಯರು ಶ್ರೀಮತಿ ಮಾಸರ್ಲಿನ್ ಲೀನಾ ಪಿರೇರಾ , ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಕುಂಭಶ್ರೀ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗಿರೀಶ್ ಕೆ.ಎಚ್ , ಎಚ್ ಮೊಹಮ್ಮದ್ ಪತ್ರಕರ್ತರು, ಶ್ರೀ ಶ್ರೀಧರ ಆಚಾರ್ಯ ಉದ್ಯಮಿಗಳು ಖಂಡಿಗ, ಅರವಿಂದ ಶೆಟ್ಟಿ ಖಂಡಿಗ ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕರು ಶ್ರೀಮತಿ ಯಶೋಧ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ವಂದಿಸಿದರು. ಕುಮಾರಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು . ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ನಾಯಕರಾದ ಕುಮಾರಿ ಮೇಘ ಕುಮಾರಿ ದಿವ್ಯ , ಸುಜನ್, ಸಾನ್ವಿತ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya
error: Content is protected !!