34.6 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.17ರಂದು ಗ್ರಾ.ಪಂ. ಪ್ರಭಾರ ಅಧ್ಯಕ್ಷ ಪೂರ್ಣಾಕ್ಷ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕ ಧೀರಜ್ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಇಲಾಖಾಧಿಕಾರಿಗಳು ಗೈರು ಗ್ರಾಮಸ್ಥರು ಹೈರಾಣ:
ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಬಾಕಿ ಉಳಿದ ಇಲಾಖೆಯ ಅಧಿಕಾರಿಗಳು ಗ್ರಾಮ ಸಭೆಗೆ ಬರಬೇಕು ಅಲ್ಲಿಯವರೆಗೆ ಸಭೆ ನಡೆಯಲು ಬಿಡುವುದಿಲ್ಲ ಎಂದು ಸಭೆಯ ಪ್ರಾರಂಭದಲ್ಲಿ ಗ್ರಾಮಸ್ಥರು ಪಟ್ಟು ಹಿಡಿದರು. ಅಧಿಕಾರಿಗಳು ಕೂಡ ಕಾನೂನು ನನ್ನು ಪಾಲಿಸಬೇಕು. ಪುದುವೆಟ್ಟು ಗ್ರಾಮವನ್ನು ಅಧಿಕಾರಿಗಳು ಪದೇ ಪದೇ ನಿರ್ಲಕ್ಷ್ಯ ಧೋರಣೆ ಮಾಡುತ್ತಿದ್ದಾರೆ. ಪ್ರತಿ ಬಾರಿ ಕೊರಂ ಕೊರತೆ ಇರುತಿತ್ತು ಆದರೆ ಇಂದು ಅಧಿಕಾರಿಗಳು ಕೂಡ ಗೈರು ಆಗಿದ್ದಾರೆ ಅಷ್ಟೇ ಅಲ್ಲದೆ ಗ್ರಾಮಸ್ಥರು ಕೂಡ ಕ್ಷೀಣ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರಾಮಸ್ಥರ್ರ್ರೋವರು ತಿಳಿಸಿದರು.

ಸಮಸ್ಯೆಯನ್ನು ಯಾರ ಬಳಿ ಕೇಳುವುದು:
ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಇರುವ ಕಾರಣ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಪಿಡಿಓ ರವಿ ಬಸಪ್ಪ ಹೇಳಿದರು. ಅವರು ಸಭೆಗೆ ಹಾಜರಾಗಲು ಅನಾನುಕೂಲವಾಗುತ್ತದೆ ಎಂದು ತಹಶೀಲ್ದಾರ್ ಗ್ರಾ.ಪಂ.ಅಧ್ಯಕ್ಷರಿಗೆ ತಿಳಿಸಿದ್ದಾರೆ ಎಂದು ಪಿಡಿಓ ತಿಳಿಸಿದರು. ಸರ್ವೇ ನಂಬ್ರ 267ರ ಮಾಹಿತಿ ಬೇಕು ಈ ಬಗ್ಗೆ ಯಾರು ತಿಳಿಸುತ್ತಾರೆ ಎಂದು ಗ್ರಾಮಸ್ಥ ಕೇಳಿದರು. ಈ ಬಗ್ಗೆ ನೀವು ಲಿಖಿತ ರೂಪದಲ್ಲಿ ನೀಡಿ ಅಥವಾ ನಿಮ್ಮ ಪ್ರಶ್ನೆಯನ್ನು ತಿಳಿಸಿ ಪಿಡಿಓ ಸಂಬಂಧಪಟ್ಟವರಿಗೆ ತಿಳಿಸುತ್ತಾರೆ ಎಂದು ಮಾರ್ಗದರ್ಶಿ ಅಧಿಕಾರಿ ಧೀರಜ್ ಹೇಳಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮ ಸಭೆಗೆ ಹಾಜರಾಗುತ್ತಾರೆ ಎಂದು ಮಾಹಿತಿ ನೀಡಿದರು. ಪೊಲೀಸ್ , ಪಶು ಸಂಗೋಪನಾ, ಮೆಸ್ಕಾಂ, ಆರೋಗ್ಯ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸದಸ್ಯರಾದ ಭಾಸ್ಕರ, ಯಶವಂತ ಗೌಡ ಡೆಚ್ಚಾರು , ಅಪ್ಪಿ, ರೇಣುಕಾ, ವನಿತಾ ಹಾಗೂ ಇಂದಿರಾ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಓ ರವಿ ಬಸಪ್ಪ ಸ್ವಾಗತಿಸಿದರು.

Related posts

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya
error: Content is protected !!