25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಇಲ್ಲಿಯ ವೈಭವ್ ಆರ್ಕೆಡ್ ನಲ್ಲಿ ಕೋಟಕ್ ಲೈಫ್ ಆಫೀಸ್ ಉದ್ಘಾಟನೆಗೊಂಡು 1 ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದ ಸಂಭ್ರಮಾಚರಣೆಯನ್ನು ಕೋಟಕ್ ಲೈಫ್ ಏರ್ಯ ಹೆಡ್ ಮೈಕಲ್ ಡಿಸೋಜ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ ಬೆಳ್ತಂಗಡಿ ಬ್ರಾಂಚ್ ಜನತೆಗೆ ಒಂದು ವರ್ಷದಲ್ಲಿ ರೂ. 55 ಕೋಟಿ ಆರ್ಥಿಕ ಭದ್ರತೆ ನೀಡಿದೆ ಇದು ಬ್ರಾಂಚ್ ವ್ಯಾಪ್ತಿಯ ಸಾಧನೆಯಲ್ಲಿ ದೇಶದಲ್ಲಿ 4 ನೇ ಸ್ಥಾನ ರಾಜ್ಯದಲ್ಲಿ 2 ನೇ ಸ್ಥಾನ ಪಡೆದು 2ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಮುಂದಿನ ವರ್ಷದಲ್ಲಿ ಬೆಳ್ತಂಗಡಿ ಕೋಟಕ್ ಲೈಫ್ ದೇಶದಲ್ಲೇ ಅತ್ಯುನ್ನತ ಸ್ಥಾನದಲ್ಲಿ ಗುರುತಿಸುವಂತಾಗಲಿ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಕ್ ಲೈಫ್ ಮಂಗಳೂರು ಚೀಫ್ ಎಜೇಂನ್ಸಿ ಪಾಲುದಾರರಾದ ಪದ್ಮ ಬೆಳಚಡ ಹಾಗೂ ಸೀನಿಯರ್ ಎಜೇಂನ್ಸಿ ಪಾಲುದಾರ ಚಂದ್ರಶೇಖರ್ ರವರುಗಳು ಮಾತನಾಡಿ ಮುಂದಿನ ದಿನಗಳಲ್ಲೂ ಜನತೆಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಬೆಳ್ತಂಗಡಿ ಬ್ರಾಂಚ್ ಮುಂಚೂಣಿಯಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ, ಕಡಬ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಗಳು ಪ್ರಜ್ವಲ್ ಅಡೂರ್, ದುರ್ಗಾಪ್ರಸಾದ್, ರವಿ ಆಚಾರ್ಯ, ಚೀಫ್ ಎಜೇಂನ್ಸಿ ಪಾಲುದಾರರಾದ ದಿನಕರ್ ಕೆ., ಗಿರೀಶ್ ಬಿ. ಜಿ., ಸೀನಿಯರ್ ಎಜೇಂನ್ಸಿ ಪಾಲದಾರರಾದ ಅನಿತಾ ಪ್ರದೀಪ್ ಶೆಟ್ಟಿ, ಯೋಗೀಶ್ ಆಳಂಬಿಲ ಕೊಕ್ಕಡ, ಬೆಳ್ತಂಗಡಿ, ಕಡಬ., ಪುತ್ತೂರು, ಮಡಿಕೇರಿ ಬ್ರಾಂಚ್ ಏಜೇಂನ್ಸಿ ಪಾಲುದಾರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya
error: Content is protected !!