September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ತೀರಾ ಹದಗೆಟ್ಟು ಹೋಗಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.

ರಸ್ತೆಯಲ್ಲಿ ಅಲ್ಲಲ್ಲಿ ಹೊಂಡ-ಗುಂಡಿಗಳು ನಿರ್ಮಾಣವಾಗಿ ಪ್ರತಿ ನಿತ್ಯ ಪ್ರಯಾಣಿಸುವ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತಿಚೇಗೆ ಅಲ್ಲಲ್ಲಿ ಕಾಟಾಚಾರಕ್ಕೆ ತೇಪೆ ಕಾರ್ಯ ನಡೆದಿದ್ದು, ಗುಂಡಿಗಳಿಗೆ ಕೇವಲ ಜಲ್ಲಿ ಕಲ್ಲು ಹಾಕಿದ್ದು ಅದು ಎದ್ದು ಹೋಗಿ ರಸ್ತೆಯಲ್ಲಿ ಹರಡಿಕೊಂಡಿದೆ. ಕೆಲವು ಕಡೆಗಳಲ್ಲಿ ನಾಗರಿಕರೇ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ಸಂಚಾರಕ್ಕೆ ತಕ್ಕ ಮಟ್ಟಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ: ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮನವಿ ಮೇರೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರದ ಜೊತೆ ಮಾತನಾಡಿ, ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯಿಂದ
ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ ಅನುದಾನವನ್ನು ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದರ ಶಿಲಾನ್ಯಾಸ ಕಾರ್ಯಕ್ರಮ ನಾಳೆ ಫೆ.18ರಂದು ಪೂರ್ವಾಹ್ನ:9.30 ಕ್ಕೆ ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ನಡೆಯಲಿದೆ. ಶಿಲಾನ್ಯಶವನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ನೆರವೇರಿಸಲಿದ್ದು, ತಾಲೂಕಿನ ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರು ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮ ಪಂಚಾಯತುಗಳು ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಂಘ-ಸಂಸ್ಥೆಯವರು, ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!