22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

ಉಜಿರೆ: ಕರ್ನಾಟಕ ರಾಜ್ಯದಲ್ಲಿ 12 ಬರಪೀಡಿತ ಜಿಲ್ಲೆಗಳು ಹಾಗೂ ಎರಡು ನಗರ ಪ್ರದೇಶದ ವ್ಯಾಪ್ತಿಯಲ್ಲಿ 14,80,519 ಯುವ ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳುವ ಮೂಲಕ 3,86,432 ಘನ ಮೀಟರ್ ನೀರನ್ನು ಈಗಾಗಲೆ ಸಂರಕ್ಷಿಸಲಾಗಿದೆ ಯುನಿಸೆಫ್‌ನ  ಹಿರಿಯ ಅಧಿಕಾರಿ ವೆಂಕಟೇಶ್ ಅರಳಿಕಟ್ಟೆ ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ  ಜಂಟಿ ಆಶ್ರಯದಲ್ಲಿ ಆಯೋಜಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದ್ದು, ಸರ್ವರ ಸಹಕಾರವನ್ನು ಕೋರಿದರು. ಯುನಿಸೆಫ್‌ನ ಡಾ. ಪ್ರಭಾತ್ ಮಟ್ಟಾಡಿ ಶುಭ ಹಾರೈಸಿದರು.
ಎಸ್.ಡಿ.ಎಂ. ಕಾಲೇಜಿನ ಇನ್ನೂರು ವಿದ್ಯಾರ್ಥಿಗಳು ನೀರು ಉಳಿಸಿ ಜಾಥಾದಲ್ಲಿ ಭಾಗವಹಿಸಿದರು.
ಮಡಂತ್ಯಾರು ಸೇಕ್ರೆಡ್‌ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಜಲಸಂರಕ್ಷಣೆ ತಜ್ಞರಾದ ಡಾ. ಜೋಸೆಫ್, ಎನ್. ಎಂ. ನೀರುಸಂರಕ್ಷಣೆ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿದರು.


ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ. ಮಹೇಶ್‌ಕುಮಾರ್ ಶೆಟ್ಟಿ ಮತ್ತು ಪ್ರೊ. ದೀಪಾ, ಆರ್.ಪಿ., ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ್ ಕಾರಂತ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಎಸ್.ಎಸ್. ಉಪಸ್ಥಿತರಿದ್ದರು.

Related posts

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya
error: Content is protected !!