30.7 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರಿಗೆ ಗುರುವಾಯನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಮ್ ಇವರ ನೇತೃತ್ವದಲ್ಲಿ, ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಬಗ್ಗೆ , ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು. ಈ ಮನವಿಗೆ ಸಚಿವರು ಅಲ್ಲೇ ಇದ್ದ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವ ಬಗ್ಗೆ ಆದೇಶವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya
error: Content is protected !!