27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ


ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆ.16 ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಾಣ ರಾವ್,  ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ, ಸಂತೋಷ್ ಗೌಡ, ಶಿವರಾಮ್, ಶ್ರೀಮತಿ ಪವಿತ್ರ, ಶ್ರೀಮತಿ ಭವಾನಿ, ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ  ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0825626644, 9663464648, 8147263422

Related posts

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya
error: Content is protected !!