22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ


ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆ.16 ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಾಣ ರಾವ್,  ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ, ಸಂತೋಷ್ ಗೌಡ, ಶಿವರಾಮ್, ಶ್ರೀಮತಿ ಪವಿತ್ರ, ಶ್ರೀಮತಿ ಭವಾನಿ, ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ  ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0825626644, 9663464648, 8147263422

Related posts

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya
error: Content is protected !!