36.4 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭವು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14 ರಂದು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರ್ಶ್ವನಾಥ ಅಜ್ರಿ ಪ್ರಾಂಶುಪಾಲರು ಶ್ರೀ ದವಳ ಕಾಲೇಜ್ ಮೂಡಬಿದಿರಿ ಇವರು ವಹಿಸಿ ಮಾತನಾಡಿ ಎನ್ಎಸ್ಎಸ್ ಒಬ್ಬ ವ್ಯಕ್ತಿಯ ಪರಿಪೂರ್ಣತೆಗೆ ಹೇಗೆ ಸಾಧ್ಯವಾಗುತ್ತದೆ ಎನ್ನುವಂತದ್ದನ್ನು ವಿವರಿಸಿದರು.

ಸಮಾರಂಭದ ಸಮರೋಪ ಭಾಷಣವನ್ನು ಕೆ. ಹೇಮರಾಜ್ ಸಂಚಾಲಕರು ಡಿ ಜೆ ವಿ ಸಂಘ ಮೂಡಬಿದ್ರೆ ನಿರ್ವಹಿಸಿಮಾತನಾಡಿ ಎನ್ಎಸ್ಎಸ್ ಕೈಗೊಂಡ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಯಶಸ್ವಿಯಾಗಲು ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವುದರಿಂದ ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಸಂತ ಜೂಡರ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಮುಖ್ಯೋಪಾಧ್ಯಾಯರು ಶ್ರೀಮತಿ ಮಾಸರ್ಲಿನ್ ಲೀನಾ ಪಿರೇರಾ , ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಕುಂಭಶ್ರೀ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗಿರೀಶ್ ಕೆ.ಎಚ್ , ಎಚ್ ಮೊಹಮ್ಮದ್ ಪತ್ರಕರ್ತರು, ಶ್ರೀ ಶ್ರೀಧರ ಆಚಾರ್ಯ ಉದ್ಯಮಿಗಳು ಖಂಡಿಗ, ಅರವಿಂದ ಶೆಟ್ಟಿ ಖಂಡಿಗ ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕರು ಶ್ರೀಮತಿ ಯಶೋಧ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ವಂದಿಸಿದರು. ಕುಮಾರಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು . ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ನಾಯಕರಾದ ಕುಮಾರಿ ಮೇಘ ಕುಮಾರಿ ದಿವ್ಯ , ಸುಜನ್, ಸಾನ್ವಿತ್ ಉಪಸ್ಥಿತರಿದ್ದರು.

Related posts

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya
error: Content is protected !!