July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭವು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14 ರಂದು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರ್ಶ್ವನಾಥ ಅಜ್ರಿ ಪ್ರಾಂಶುಪಾಲರು ಶ್ರೀ ದವಳ ಕಾಲೇಜ್ ಮೂಡಬಿದಿರಿ ಇವರು ವಹಿಸಿ ಮಾತನಾಡಿ ಎನ್ಎಸ್ಎಸ್ ಒಬ್ಬ ವ್ಯಕ್ತಿಯ ಪರಿಪೂರ್ಣತೆಗೆ ಹೇಗೆ ಸಾಧ್ಯವಾಗುತ್ತದೆ ಎನ್ನುವಂತದ್ದನ್ನು ವಿವರಿಸಿದರು.

ಸಮಾರಂಭದ ಸಮರೋಪ ಭಾಷಣವನ್ನು ಕೆ. ಹೇಮರಾಜ್ ಸಂಚಾಲಕರು ಡಿ ಜೆ ವಿ ಸಂಘ ಮೂಡಬಿದ್ರೆ ನಿರ್ವಹಿಸಿಮಾತನಾಡಿ ಎನ್ಎಸ್ಎಸ್ ಕೈಗೊಂಡ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಯಶಸ್ವಿಯಾಗಲು ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವುದರಿಂದ ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಸಂತ ಜೂಡರ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಮುಖ್ಯೋಪಾಧ್ಯಾಯರು ಶ್ರೀಮತಿ ಮಾಸರ್ಲಿನ್ ಲೀನಾ ಪಿರೇರಾ , ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಕುಂಭಶ್ರೀ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗಿರೀಶ್ ಕೆ.ಎಚ್ , ಎಚ್ ಮೊಹಮ್ಮದ್ ಪತ್ರಕರ್ತರು, ಶ್ರೀ ಶ್ರೀಧರ ಆಚಾರ್ಯ ಉದ್ಯಮಿಗಳು ಖಂಡಿಗ, ಅರವಿಂದ ಶೆಟ್ಟಿ ಖಂಡಿಗ ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕರು ಶ್ರೀಮತಿ ಯಶೋಧ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ವಂದಿಸಿದರು. ಕುಮಾರಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು . ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ನಾಯಕರಾದ ಕುಮಾರಿ ಮೇಘ ಕುಮಾರಿ ದಿವ್ಯ , ಸುಜನ್, ಸಾನ್ವಿತ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya
error: Content is protected !!