37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಇಲ್ಲಿಯ ವೈಭವ್ ಆರ್ಕೆಡ್ ನಲ್ಲಿ ಕೋಟಕ್ ಲೈಫ್ ಆಫೀಸ್ ಉದ್ಘಾಟನೆಗೊಂಡು 1 ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದ ಸಂಭ್ರಮಾಚರಣೆಯನ್ನು ಕೋಟಕ್ ಲೈಫ್ ಏರ್ಯ ಹೆಡ್ ಮೈಕಲ್ ಡಿಸೋಜ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ ಬೆಳ್ತಂಗಡಿ ಬ್ರಾಂಚ್ ಜನತೆಗೆ ಒಂದು ವರ್ಷದಲ್ಲಿ ರೂ. 55 ಕೋಟಿ ಆರ್ಥಿಕ ಭದ್ರತೆ ನೀಡಿದೆ ಇದು ಬ್ರಾಂಚ್ ವ್ಯಾಪ್ತಿಯ ಸಾಧನೆಯಲ್ಲಿ ದೇಶದಲ್ಲಿ 4 ನೇ ಸ್ಥಾನ ರಾಜ್ಯದಲ್ಲಿ 2 ನೇ ಸ್ಥಾನ ಪಡೆದು 2ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಮುಂದಿನ ವರ್ಷದಲ್ಲಿ ಬೆಳ್ತಂಗಡಿ ಕೋಟಕ್ ಲೈಫ್ ದೇಶದಲ್ಲೇ ಅತ್ಯುನ್ನತ ಸ್ಥಾನದಲ್ಲಿ ಗುರುತಿಸುವಂತಾಗಲಿ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಕ್ ಲೈಫ್ ಮಂಗಳೂರು ಚೀಫ್ ಎಜೇಂನ್ಸಿ ಪಾಲುದಾರರಾದ ಪದ್ಮ ಬೆಳಚಡ ಹಾಗೂ ಸೀನಿಯರ್ ಎಜೇಂನ್ಸಿ ಪಾಲುದಾರ ಚಂದ್ರಶೇಖರ್ ರವರುಗಳು ಮಾತನಾಡಿ ಮುಂದಿನ ದಿನಗಳಲ್ಲೂ ಜನತೆಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಬೆಳ್ತಂಗಡಿ ಬ್ರಾಂಚ್ ಮುಂಚೂಣಿಯಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ, ಕಡಬ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಗಳು ಪ್ರಜ್ವಲ್ ಅಡೂರ್, ದುರ್ಗಾಪ್ರಸಾದ್, ರವಿ ಆಚಾರ್ಯ, ಚೀಫ್ ಎಜೇಂನ್ಸಿ ಪಾಲುದಾರರಾದ ದಿನಕರ್ ಕೆ., ಗಿರೀಶ್ ಬಿ. ಜಿ., ಸೀನಿಯರ್ ಎಜೇಂನ್ಸಿ ಪಾಲದಾರರಾದ ಅನಿತಾ ಪ್ರದೀಪ್ ಶೆಟ್ಟಿ, ಯೋಗೀಶ್ ಆಳಂಬಿಲ ಕೊಕ್ಕಡ, ಬೆಳ್ತಂಗಡಿ, ಕಡಬ., ಪುತ್ತೂರು, ಮಡಿಕೇರಿ ಬ್ರಾಂಚ್ ಏಜೇಂನ್ಸಿ ಪಾಲುದಾರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!