22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

ಬೆಳ್ತಂಗಡಿ: ಪ್ರತಿಯೊಬ್ಬ ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಉತ್ತಮ ಗುರಿಯನ್ನು ಇಟ್ಟುಕೊಳ್ೞಬೇಕು.ಹಿಂದೆ ಬಹುತೇಕ ಮಕ್ಕಳಿಗೆ ಮಾರ್ಗದರ್ಶಕರು ಇರಲಿಲ್ಲ. ಇಂದು ಗುರುವಾಯನಕೆರೆ ಎಕ್ಸೆಲ್ ಕಾಲೇಜು ಮಕ್ಕಳ ಶಿಕ್ಷಣ ಮುಂದಿನ ಬಗ್ಗೆ ದಾರಿತೋರಿಸುವ ಉತ್ತಮ ಕೆಲಸ ಮಾಡುತ್ತಿದೆ ಇದನ್ನು ಸದುಪಯೋಗಪಡಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ ಎಂದು ಶಿಕ್ಷಕ ಖ್ಯಾತ ವಾಗ್ಮಿ ಅಜಿತ್ ಕುಮಾರ್ ಕೊಕ್ರಾಡಿ ಹೇಳಿದರು.

ಅವರು ಫೆ.16 ರಂದು ಎಕ್ಸೆಲ್ ಕಾಲೇಜು ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬ ಹತ್ತನೆ ತರಗತಿ ಮಕ್ಕಳಿಗೆ ಮತ್ತು ಪೋಷಕರಿಗೆ ನಡೆದ ವಿಷೇಷ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕ ಧರಣೇಂದ್ರ ಜೈನ್ ಮಾತನಾಡಿ ಮಕ್ಕಳಿಗೆ ಯಾವ ಆಯ್ಕೆಯನ್ನು ಮಾಡಿಕೊಳ್ಳುವ ಅವಕಾಶ ಇಂದು ಇದೆ.ಆದರೆ ಮಕ್ಕಳಲ್ಲಿ ಕಲಿಯುವ ಆಸಕ್ತಿ ಬೇಕು. ಹಿರಿಯರು ನಮಗೇನು ಮಾಡಿದ್ದಾರೆ ಎನ್ನುವುದಕ್ಕಿಂತ ನಾನೇನು ಹಿರಿಯರಿಗೆ ನೀಡಬಲ್ಲೆನು ಎನ್ನುವ ಸಂಕಲ್ಪ ಮಾಡಬೇಕು ಎಂದರು.

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅದ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳು ಇಂಜಿನಿಯರ್, ಡಾಕ್ಟರ್ ಅಗಬೇಕು ಎನ್ನುವ ಕನಸು ಕಾಣುವುದು ತಪ್ಪಲ್ಲ ಆದರೆ ಎಕ್ಸೆಲ್ ಕಾಲೇಜು ಅವರನ್ನು ಉತ್ತಮ ಇಂಜಿನಿಯರ್, ಉತ್ತಮ ಡಾಕ್ಟರ್ ಮಾಡುವ ಕಸಸು ಕಾಣುತ್ತದೆ ಮತ್ತು ಮಾಡಿಸಿಯೇ ಮಾಡುತ್ತದೆ. ನುರಿತ ಉಪನ್ಯಾಸಕರ ತಂಡ ಕಾಲೇಜಿನಲ್ಲಿ ಇದ್ದು ಉತ್ತಮ ಹಾಸ್ಟೆಲ್ ವ್ಯವಸ್ಥೆ ಇದೆ. ಸಿಇಟಿ,ನೀಟ್, ಜೆಯುಯು ಇನ್ನಿತರ ಬೇರೆ ಬೇರೇ ಪರೀಕ್ಷ ತಯಾರಿ ಬಗ್ಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಮುಂದೆ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಒಂದು ತಿಂಗಳ ಕಾಲ ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ಹಮ್ಮಿಕೊಳ್ಕಲಾಗುತ್ತಿದೆ. ಮಕ್ಕಳ ಉತ್ತಮ ಭವಿಷ್ಯ ರೂಪಿಸುವುದೇ ಎಕ್ಸೆಲ್ ಕಾಲೇಜಿನ ಕನಸು ಎಂದರು.

ಪತ್ರಕರ್ತರಾದ ಮನೋಹರ್ ಬಳಂಜ, ಸಂತೊಷ್ ಪಿ ಕೋಟ್ಯಾನ್ ಬಳಂಜ ಶುಭಹಾರೈಸಿದರು.

ಎಕ್ಸೆಲ್ ವಿದ್ಯಾಸಾಗರ ಕ್ಯಾಂಪಸ್ ನ ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿ, ಎಕ್ಸೆಲ್ ಅರಮಲೆಬೆಟ್ಟ ಕ್ಯಾಂಪಸ್ ನ ಪ್ರಾಂಶುಪಾಲ ಡಾ.ಪ್ರಜ್ವಲ್ ಕಜೆ ವಂದಿಸಿದರು. ಉಪನ್ಯಾಸಕ ಮಹಮ್ಮದ್ ಮುನೀರ್ ಕಾರ್ಯಕ್ರಮ ನಿರೂಪಿಸಿದರು.

ಸುಮಾರು 350 ಕ್ಕೂ ಹೆಚ್ಚು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆದರು.

Related posts

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!