September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರಿಗೆ ಗುರುವಾಯನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಮ್ ಇವರ ನೇತೃತ್ವದಲ್ಲಿ, ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಬಗ್ಗೆ , ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು. ಈ ಮನವಿಗೆ ಸಚಿವರು ಅಲ್ಲೇ ಇದ್ದ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವ ಬಗ್ಗೆ ಆದೇಶವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!