30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ


ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆ.16 ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಾಣ ರಾವ್,  ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ, ಸಂತೋಷ್ ಗೌಡ, ಶಿವರಾಮ್, ಶ್ರೀಮತಿ ಪವಿತ್ರ, ಶ್ರೀಮತಿ ಭವಾನಿ, ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ  ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0825626644, 9663464648, 8147263422

Related posts

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya
error: Content is protected !!